ಶುಕ್ರವಾರ, ಏಪ್ರಿಲ್ 2, 2010

ತಾ. ೨-೪-೧೦
ಇವೊತ್ತಿನ ಉದಯವಾಣಿಯ ವಾರ್ತೆ:
ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ: ಸುಬ್ರಹ್ಮಣ್ಯ ಶ್ರೀ
ಪ್ರಕೃತಿಯಲ್ಲಿ ಭಗವಂತನ ಶಕ್ತಿ ಅಡಗಿದೆ. ಆದುದರಿಂದಾಗಿ ನಮ್ಮ ಹಿರಿಯರು ಪ್ರಕೃತಿಯನ್ನು ಆರಾಧನೆ ಮಾಡುವುದರೊಂದಿಗೆ ಪ್ರಕೃತಿಯ ಸೊಬಗಿನ ನಡುವೆ ಆರಾಧನಾಲಯಗಳನ್ನು ನಿರ್ಮಿಸಿದರು. ನಮ್ಮದು ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ ಎಂದು ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. (ವಾರ್ತೆಯಲ್ಲಿ ಅವರ ಇನ್ನೂ ಕೆಲವು ಅಭಿಪ್ರಾಯಗಳಿವೆ)
ಇದೇ ವಾರ್ತೆ ಹೀಗೆ ಮುಂದುವರಿದಿದೆ:
.....ವಾಸ್ತು ತಜ್ಞ ಶ್ರೀಕೃಷ್ಣ ಮಹಾಲಿಂಗ ಪ್ರಸಾದ್ ಮುನಿಯಂಗಳ ಮಾತನಾಡಿ ನಮ್ಮ ಪ್ರದೇಶದಲ್ಲಿನ ಬಹುತೇಕ ಶ್ರದ್ಧಾಕೇಂದ್ರಗಳು ಅರಣ್ಯ ವ್ಯಾಪ್ತಿಯಲ್ಲಿರುವುದರಿಂದ ಜೀರ್ಣೋದ್ಧಾರದಂತಹ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗುತ್ತಿರುವುದು ಎಲ್ಲ ಕಡೆ ಕಂಡುಬರುತ್ತಿದೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕು ಎಂದರು.
*********
ನಾನು ಬರೆದ ಪತ್ರಕ್ಕೆ ಉತ್ತರಿಸಲು ದ.ಕ. ಜಿಲ್ಲಾ ಅರಣ್ಯಾಧಿಕಾರಿಯವರಿಗೆ ಇನ್ನೂ ಪುರುಸೊತ್ತು ಸಿಕ್ಕಿಲ್ಲ ಎಂಬುದು ವಿಷಾದದ ಸಂಗತಿ. ಮೊನ್ನೆ ಅಂದರೆ ೩೧-೩-೧೦ಕ್ಕೆ ಒಂದು ನೆನಪೋಲೆ ಅವರಿಗೆ ಬರೆದಿದ್ದೇನೆ.
*********
ಅನೇಕ ಸ್ನೇಹಿತರು ಬ್ಲಾಗನ್ನು ಓದಿರುವುದಾಗಿ ಹೇಳಿದ್ದಾರೆ. ಆದರೆ ಪ್ರತಿಕ್ರಿಯೆಗಳು ಇಲ್ಲವಾಗಿದೆ. ಅಶೋಕರ ಹತ್ತಿರ ಇದನ್ನು ಹೇಳಿದ್ದಕ್ಕೆ, "ಜನ ಜಡ. ಚುಚ್ತಾ ಇರಬೇಕು" ಎಂದರು. ಇದೊಂದು ಸಣ್ಣ ಮಟ್ಟದ ಚಳುವಳಿ: ಪ್ರಜಾಪ್ರಭುತ್ವದ ಅನುಸಂಧಾನದ ಒಂದು ಸಣ್ಣ ಪ್ರಯತ್ನ. ನೀವೂ ಇದರಲ್ಲಿ ಸೇರಿಕೊಳ್ಳಿ ಎಂದು ನಾನು ಬಾಯಿಬಿಟ್ಟು ಹೇಳುವುದು ಸಭ್ಯತೆಯಲ್ಲ. ಇದು ನಮ್ಮೆಲ್ಲರ ದೇಶ.
ನಾನು ಬರೆಯುತ್ತಿರುವುದು ಓದುಗರಿಗೆ ಮನರಂಜನೆ ನೀಡುವ ಉದ್ದೇಶದಿಂದ ಖಂಡಿತಾ ಅಲ್ಲ.
ಅಶೋಕವರ್ಧನರ ಪ್ರತಿಕ್ರಿಯೆ:
ಇಂದು ಆರಾಧನಾ ಸ್ಥಳಗಳ ವಿಪುಲತೆಯಲ್ಲಿ ಸ್ವಾಮಿಗಳು ಚರಿತ್ರೆಯನ್ನಷ್ಟೇ ಹೇಳಬಲ್ಲರು. ವರ್ತಮಾನದಲ್ಲಿ ಅದನ್ನು ರೂಢಿಸುವ ಧೈರ್ಯವಿದ್ದಿದ್ದರೆ, ತಳ ಇಲ್ಲದ ಮಾನದಲ್ಲಿ (ಸೇರಿನಲ್ಲಿ) ಭವಿಷ್ಯವನ್ನು ಅಳೆಯುವ ಶಾಸ್ತ್ರಕ್ಕೆ ಸುಮಾರು ಆರು ಎಕ್ರೆ ವ್ಯಾಪ್ತಿಯ ಪ್ರಾಕೃತಿಕ ಹಾನಿಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ.
ನನ್ನ ತಿಳುವಳಿಕೆಯಂತೆ ಇಂದು ಆರಾಧನೀಯವಾಗಿರುವ ‘ವಾಸ್ತು’ ಸಂದ ಕಾಲದ ವಿಜ್ಞಾನ, ಸಿವಿಲ್ ಇಂಜಿನಿಯರಿಂಗ್. ಆದರೆ ನಾಗರಿಕತೆಯ ಬೆಳೆವಣಿಗೆಯಲ್ಲಿ ನಮ್ಮ ಪ್ರಾಕೃತಿಕ ತಿಳುವಳಿಕೆಗಳು ಮತ್ತದಕ್ಕೆ ಸಂವಾದಿಯಾಗಿ ಉತ್ಪನ್ನಗಳು ಸಾಕಷ್ಟು ಮುಂದುವರಿದ ಕಾಲದಲ್ಲಿ ವಾಸ್ತುತಜ್ಞರ ಅನುಸರಣೆ ಗಡಿರಕ್ಷಣೆಗೆ ಬಿಲ್ಲು ಭಾಲೆಗಳನ್ನು ಹಿಡಿದು ಹೊರಟಷ್ಟೇ ಅದ್ಭುತ!

ಕಾಮೆಂಟ್‌ಗಳಿಲ್ಲ: